ಅಬ್ಬರಿಸಿ ಗೀಳಿಡುವ ಕಡಲಲಿ
ಹುಟ್ಟಿಲ್ಲದ ದೋಣಿಗೆ ಅಂಬಿಗಳು
ಹುಟ್ಟಿಲ್ಲದ ದೋಣಿಗೆ ಅಂಬಿಗಳು
ಅಂಬೆಗಾಲಿಗೆ ನೆಲ ಗೀರದಂತೆ
ಅಂಗಳವ ಕಾದಳು
ರಕ್ತಬಸಿದು ಅಮೃತ ಎರೆದಳು
ಗುಳಿ ಕೆನ್ನೆ ಕಂಡು
ಗುಳಿ ಕೆನ್ನೆ ಕಂಡು
ಕಣ್ಣೀರ ಮರೆತವಳು
ಹಡೆದವಳು
; ಹೊತ್ತು ನಡೆದ ತೇರವಳು.
; ಹೊತ್ತು ನಡೆದ ತೇರವಳು.
ಬರಬಂದು ಬಿರುಬಿಟ್ಟ ನೆಲದಲಿ
ಚೇತನ ತುಂಬಿದ ಮಳೆಯವಳು
ಚೇತನ ತುಂಬಿದ ಮಳೆಯವಳು
ಮೂಲೆ ಮೊಡಕುಗಳ ನೀವಿ
ಅಂದಕೊಟ್ಟಳು
ಅಂದಕೊಟ್ಟಳು
ಹೊತ್ತಿನ ಕೂಳು ಅರಿಕೆ
ಆದಿತೆಂದು ವ್ರತವೆಂದಳು
ದೃಷ್ಟರ ದೃಷ್ಟಿಗೆ ಬೆಂಕಿಯಿಟ್ಟು
ಲಟಿಕೆ ಮುರಿದವಳು
ನೆಲೆ ಅವಳು
ನೆಲೆ ಅವಳು
;ನನ್ನ ತಲೆ ಮೇಲಣ ಸೂರವಳು.
ಕೇಳಿದೆಲ್ಲವ ನೀಡುತಾ
ಮಾಡಿದೆಲ್ಲವ ಸಹನೆಯಲಿ ಸಹಿಸುವ
ಧರೆಯವಳು
ಧರೆಯವಳು
ನಗುವ ನನ್ನ ಮುಖವಾಡವ ಕಂಡು
ನೆಮ್ಮದಿಯ ನಿಟ್ಟುಸಿರಾದವಳು
ನೆಮ್ಮದಿಯ ನಿಟ್ಟುಸಿರಾದವಳು
ನಾ ಸೋತುನಿಂತ ಪಂದ್ಯವೇ ತಪ್ಪೆಂದು
ಹೀಗಳೆದವಳು
ಹೀಗಳೆದವಳು
ಉತ್ಸಾಹದಲ್ಲಿ ನಾ ಕೆಮ್ಮಿದನ್ನೂ
ಚೆಂದದ ಕವಿತೆ ಎಂದವಳು
ಮರೆಯಲೇ ಹನಿಗಣ್ಣ ತೀಡಿ
ನಗುವವಳು
ತನ್ನ ಬೊಗಸೆಯಲೇ ಈ ಬದುಕ ತುಂಬಿಕೊಟ್ಟ
ತಾಯವಳು ; ನನ್ನ ತಾಯವಳು.
ತನ್ನ ಬೊಗಸೆಯಲೇ ಈ ಬದುಕ ತುಂಬಿಕೊಟ್ಟ
ತಾಯವಳು ; ನನ್ನ ತಾಯವಳು.
-ಶರತ್ ಚಕ್ರವರ್ತಿ.